ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಮಕ್ಕಳಿಗೆ ಜೀವನ ಮೌಲ್ಯಗಳ  ಶಿಕ್ಷಣ ನೀಡಬೇಕು : ಎಸ್. ಮಂಜು

ಚಿಕ್ಕಮಗಳೂರು: ಇಂದಿನ ಮಕ್ಕಳು ಇಂದಿನ ಪ್ರಜೆಗಳು. ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ  ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್.ಮಂಜು ಹೇಳಿದರು.      ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣಾ ಇಲಾಖೆ […]

ಬಾಬಾಬುಡನ್‌ಗಿರಿಯಲ್ಲಿ ಗ್ಯಾರವಿ ಹಬ್ಬ ಆಚರಣೆ

ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ದಾದಾ ಹಜ್ರತ್ ಮೀರ್‌ಖಲಂದರ್ ಅವರ ಗ್ಯಾರವಿ ಹಬ್ಬವನ್ನು ಬಾಬಾಬುಡನ್‌ಗಿರಿಯಲ್ಲಿ ಕರ್ನಾಟಕ ರಾಜ್ಯ ಹಜರತ್ ಟಿಪ್ಪೂ ಸುಲ್ತಾನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಚರಿಸಲಾಯಿತು.ಕಳೆದ ೧೨ ವರ್ಷಗಳಿಂದ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಜಮ್‌ಷೀದ್‌ಖಾನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಈ ಗ್ಯಾರವಿ ಆಚರಣೆಯಲ್ಲಿ ರಾಜ್ಯ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಿ ಭಾಗವಹಿಸಿ ಭಕ್ತಿಯ ನಮನ ಸಲ್ಲಿಸಿದರು.ಕಾರ್ಯಕ್ರಮದ ಅಂಗವಾಗಿ ಬಾಬಾಬುಡನ್‌ಗಿರಿಯಲ್ಲಿ ಮೆರವಣಿಗೆ ನಡೆಸಲಾಗಿದ್ದು, ಭಕ್ತರ ಜೊತೆಗೆ ದಬ್ ಮಕ್ಕಳ ಭಕ್ತಿಗೀತೆಯೊಂದಿಗೆ ಮೆರವಣಿಗೆ ಚಾಲನೆ […]

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ: ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು:ಪ್ರವಾಸಿಗರ ಟಿ.ಟಿ ವಾಹನ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯ ವಾಗಿದೆ.ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರುಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು,ನಾಲ್ವರಿಗೆ ಗಂಭೀರ ಗಾಯವಾಗಿದ್ದು ,ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು