ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಕೆರೆಗೆ ಬಿದ್ದಿದ್ದ ಜಿಂಕೆ ರಕ್ಷಿಸಿದ  ಯುವಕರು

ಚಿಕ್ಕಮಗಳೂರು: ಕೆರೆಗೆ ಬಿದ್ದು ಮೇಲೆ ಏಳಲಾಗದೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಯನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಯುವಕರು ರಕ್ಷಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಮರ್ಕಲ್ ಗ್ರಾಮದಲ್ಲಿ ಕೆರೆಗೆ ಬಿದ್ದಿದ್ದ ಜಿಂಕೆಯನ್ನ ಕಂಡು ನಾಯಿಗಳು ತೀವ್ರವಾಗಿ ಬೊಗಳುತ್ತಿದ್ದವು. ಜಿಂಕೆ ನಾಯಿಗಳ ಕೈಗೆ ಸಿಕ್ಕಿದ್ದರೆ ಬಹುಶಃ ನಾಯಿಗಳ ದಾಳಿಗೆ ತುತ್ತಾಗುತ್ತಿತ್ತು. ಗಾಬರಿಯಿಂದ ಓಡುವಾಗ ಆಯತಪ್ಪಿ ಕೆರೆಗೆ ಬಿದ್ದಿತ್ತು. ಕೆರೆಗೆ ಬಿದ್ದ ಜಿಂಕೆಯನ್ನು ಕಂಡು ಜಿಂಕೆಯನ್ನ ಸುತ್ತುವರಿದು ನಾಯಿಗಳು ಬೊಗಳುತ್ತಿದ್ದವು. ಇದನ್ನು ಗಮನಿಸಿದ ಮರ್ಕಲ್ […]

ಭದ್ರಾ ಹುಲಿ ಮೀಸಲು ವ್ಯಾಪ್ತಿಯ ಅರಣ್ಯ ಒತ್ತುವರಿ -ಮಿಂಚಿನ ಕಾರ್ಯಾಚರಣೆ : 43 ಎಕರೆ ಅರಣ್ಯ  ಒತ್ತುವರಿ ತೆರವು

ಚಿಕ್ಕಮಗಳೂರು :ಜಿಲ್ಲೆಯ ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿದ್ದ 43 ಎಕರೆ ಭೂಮಿ ತೆರವುಗೊಳಿಸಲಾಗಿದೆ. ಮುತ್ತೊಡಿ ವಲಯದ, ಕೆಸವಿನ ಮನೆ ಸರ್ವೇ ನಂಬರ್ 43ರಲ್ಲಿ ಚಿಕ್ಕಮಗಳೂರು ನಗರದ ನರೇಂದ್ರ ಪೈ ಎಂಬುವರಿಗೆ ಸೇರಿದ ಕೆಸವಿನಮನೆಹಕ್ಲು ತೋಟದಲ್ಲಿ ಅಭಯಾರಣ್ಯಕ್ಕೆ ಸೇರಿದ 43 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು. ಈ ಸಂಭಂದ 2022-23 ಸಾಲಿನಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದ ಆದೇಶ: ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ […]