ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ : ಸಂಚಾರಿ ನಿಯಮ ಉಲ್ಲಂಘನೆ – ದ್ವಿಚಕ್ರ ವಾಹನ ಚಾಲಕನಿಗೆ 14 ಸಾವಿರ ದಂಡ

ಚಿಕ್ಕಮಗಳೂರು: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ , ಹಲವು ಸಂಚಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಚಾಲಕನಿಗೆ ಮೂಡಿಗೆರೆ ನ್ಯಾಯಾಲಯ 14 ಸಾವಿರ ದಂಡ ವಿಧಿಸಿದೆ. ಜೂನ್ 2 ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ ರುದ್ರೇಶ್ ನಾಯ್ಕನನ್ನು ತಡೆದು ದಾಖಲೆ ಪರಿಶೀಲಿಸಿದರು. ಹೊಗೆ ತಪಾಸಣೆ , ಡಿ.ಎಲ್. ಸೇರಿದಂತೆ ಬೈಕ್ ಗೆ ಸೂಕ್ತ […]
ರೈತರ ಸಮಾವೇಶ : ರೈತ–ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಲು ಒಕ್ಕೊರಲ ಆಗ್ರಹ

ಚಿಕ್ಕಮಗಳೂರು: ಅರಣ್ಯ ಕಾಯ್ದೆಗಳ ಹೆಸರಿನಲ್ಲಿ ಜಿಲ್ಲೆಯ ರೈತರ ಬದುಕನ್ನು ಅರಣ್ಯ ಇಲಾಖೆ ಕಸಿದು ಕೊಳ್ಳುತ್ತಿದ್ದು ಅಂತಹ ಕಾಯ್ದೆಗಳನ್ನು ರದ್ದುಪಡಿಸಬೇಕು, ರೈತರನ್ನು ರಕ್ಷಿ ಸಬೇಕು ಎಂಬ ಒಕ್ಕೊರಲ ಒತ್ತಾಯ ರೈತರ ಸಮಾವೇಶದಲ್ಲಿ ವ್ಯಕ್ತವಾಗಿದೆ. ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಶೃಂಗೇರಿ ಕ್ಷೇತ್ರದ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಬೆಳೆಗಾರರ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಪಕ್ಷಾತೀತವಾಗಿ ಭಾಗವಹಿಸಿ ಬೆಂಬಲ ಸೂಚಿಸಿದರು. ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ […]
ಟ್ರಕ್ಕಿಂಗ್ : ದಾರಿ ತಪ್ಪಿದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು -ಮಧ್ಯರಾತ್ರಿ ಪತ್ತೆ

ಚಿಕ್ಕಮಗಳೂರು : ಟ್ರಕ್ಕಿಂಗ್ ಹೊರಟ ಮೆಡಿಕಲ್ ಕಾಲೇಜು11 ವಿದ್ಯಾರ್ಥಿಗಳು ದಾರಿ ತಪ್ಪಿದ ಘಟನೆ ನಡೆದಿದೆ. ಬಲ್ಲಾಳರಾಯನ ದುರ್ಗಾ ಕಾಡಲ್ಲಿ ನಿತ್ರಾಣಗೊಂಡಿದ್ದ 11 ವಿದ್ಯಾರ್ಥಿಗಳು ಕೊನೆಗೂ ಮಧ್ಯರಾತ್ರಿ ಪತ್ತೆಯಾಗಿದ್ದಾರೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ಘಟನೆ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದರು. ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಆರಂಭಿಸಿದ್ದು,ದಾರಿ ತಿಳಿಯದೆ ಕಾಡಲ್ಲಿ ಅತಂತ್ರವಾಗಿ ನಿತ್ರಾಣ ಗೊಂಡಿದ್ದರು. ಪೊಲೀಸರು-ಸ್ಥಳಿಯರು-ಅರಣ್ಯ ಇಲಾಖೆ ಸಿಬ್ಬಂದಿ 6 ಗಂಟೆ […]