ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಿಕ್ಕಮಗಳೂರು ಜಿಲ್ಲೆ: ಮಲೆನಾಡ ಭಾಗದ 6 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ ರಜೆ

ಚಿಕ್ಕಮಗಳೂರು : ಮಲೆನಾಡ ಭಾಗದಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ನಾಳೆ (ಜೂ.16) ಮಲೆನಾಡ ಭಾಗದ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಸದ್ಯಕ್ಕೆ ಸೋಮವಾರ ಒಂದು ದಿನ ಮಾತ್ರ ರಜೆ ಘೋಷಿಸಿದ ಜಿಲ್ಲಾಡಳಿತ

ಗುಡ್ಡಕುಸಿತ : ವಾಹನ ಸಂಚಾರ ತಾತ್ಕಾಲಿಕ ನಿರ್ಬಂಧ – ಬದಲಿ  ಮಾರ್ಗ ಸೂಚನೆ

ಚಿಕ್ಕಮಗಳೂರು: ನಿರಂತರ ಮಳೆಯಿಂದ ಪದೇ ಪದೇ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನೆಮ್ಮಾರು – ಕೆರೆಕಟ್ಟೆ-ಕಾರ್ಕಳ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಶೃಂಗೇರಿ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ನೆಮ್ಮಾರು ಸಮೀಪ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಿರಂತರವಾಗಿ ಮಣ್ಣು ಜರುಗುತ್ತಿದೆ . ಮುಂಜಾಗ್ರತಾ & ಸುರಕ್ಷತಾ ಕ್ರಮವಾಗಿ ತಾತ್ಕಾಲಿಕವಾಗಿ ಕೆರೆಕಟ್ಟೆ, ಎಸ್. ಕೆ ಬಾರ್ಡರ್ ಮೂಲಕ ಉಡುಪಿ ಮಂಗಳೂರು ಕಡೆ ಸಾಗುವ ವಾಹನಗಳ ಸಂಚಾರವನ್ನು ನಾಳೆ ಬೆಳಿಗ್ಗೆ 8 ಗಂಟೆಯವರೆಗೆ […]

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ :  ಐವರಿಗೆ ಗಾಯ

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ-ಮಳೆ ಆಗುತ್ತಿದ್ದು ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕವಿಕಲ್ ಗಂಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಬಿದ್ದ ಕೂಡಲೇ ಹಿಂದಿನ ವಾಹನದಲ್ಲಿ ಇದ್ದವರು ತೆರಳಿ ಪ್ರಯಾಣಿಕರ ರಕ್ಷಣೆಗೆ ಮಾಡಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ . ಭೂಕುಸಿತ: ಮಳೆ ಹಿನ್ನೆಲೆಯಲ್ಲಿ ಶೃಂಗೇರಿ ಸಮೀಪದ ನೆಮ್ಮಾರು ಬಳಿ ಭೂಕುಸಿತ ಉಂಟಾಗಿ ಸಂಚಾರ […]