ಅನಾರೋಗ್ಯದ ಸಮಸ್ಯೆ : ಚೀಟಿ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನ 28 ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ […]
ಬೃಹತ್ ಮರ ರಸ್ತೆಗುರುಳಿ ಸಂಚಾರ ತಾತ್ಕಾಲಿಕ ಸ್ಥಗಿತ

ಚಿಕ್ಕಮಗಳೂರು : ಮಲೆನಾಡ ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರ ರಸ್ತೆಗುರುಳಿ ಸಂಚಾರ ತಾತ್ಕಾಲಿಕ ಸ್ಥಗಿವಾಗಿತ್ತು. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 174 ಬಂದ್ ಆಗಿತ್ತು. ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದರು. ಚಿಕ್ಕಮಗಳೂರಿನಿಂದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಎಲ್ಲಾ ಮಾರ್ಗ ಬಂದ್ ಆಗಿತ್ತು. ಮರ ತೆರವು ಮಾಡಲು ಸ್ಥಳೀಯರು ಹರಸಾಹಸ ಪಡಬೇಕಾಯಿತು. ಮರ ಬಿದ್ದ ಪರಿಣಾಮ ಕಂಬ ಮುರಿದು ವಿದ್ಯುತ್ […]