ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ದತ್ತ ಜಯಂತಿಗೆ ಚಾಲನೆ: ಅನುಸೂಯಾ ಜಯಂತಿ – ಮಹಿಳೆಯರ ಮೆರವಣಿಗೆ

Share:

ಚಿಕ್ಕಮಗಳೂರು : ಇಂದಿನಿಂದ 3 ದಿನಗಳ ಕಾಲ ನಡೆಯುವ ದತ್ತಜಯಂತಿಗೆ ಚಾಲನೆ ದೊರಕಿದೆ.
ಅನುಸೂಯ ಜಯಂತಿಯೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು,
ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ‌ ಹೊರಟಿದ್ದು ಪಾಲಿಟೆಕ್ನಿಕ್ ಸಮೀಪ ಮುಕ್ತಾಯಗೊಂಡಿದೆ.
ದತ್ತಾತ್ರೇಯ ವಿಗ್ರಹ ದೊಂದಿಗೆ ಹೊರಟ ಮೆರವಣಿಗೆಯಲ್ಲಿ ಅಪಾರ ಸಂಖ್ಯೆ ಮಹಿಳೆಯರು ಭಾಗವಹಿಸಿದ್ದು, ದತ್ತ ಭಜನೆ ಅನಸೂಯ ಭಜನೆ ಯೊಂದಿಗೆ ಮೆರವಣಿಗೆ ಸಾಗಿತು .
ಮಹಿಳೆಯರು ಮೆರವಣಿಗೆ ಬಳಿಕ ದತಪೀಠಕ್ಕೆ ತೆರಳಿ ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸಿ, ಹೋಮ ಹವನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪೊಲೀಸರ ಸರ್ಪಗಾವಲಿನಲ್ಲಿ ಕೇಸರಿಗೆ ಉಡುಗೆ ದೊಡ್ಡ ಮಹಿಳೆಯರ ಮೆರವಣಿಗೆ ಸಾಗಿದ್ದು, ಅದಕ್ಕೂ ಮೊದಲು ದೇವಾಲಯದ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು.
ಮೆರವಣಿಗೆ ಮುಂಚೂಣಿಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡರು ಭಾಗವಹಿಸಿದ್ದರು.
ಚಿಕ್ಕಮಗಳೂರು ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಾಳೆ ಮಧ್ಯಾಹ್ನದ ಬಳಿಕ ಶೋಭಾ ಯಾತ್ರೆ ನಡೆಯಲಿದ್ದು, ಅದಕ್ಕೂ ಮೊದಲು ಬೆಳಿಗ್ಗೆ ಕೆಲ ಕಾರ್ಯಕರ್ತರು ಭಿಕ್ಷಾಟನೆ ನಡೆಸಲಿದ್ದಾರೆ.
ಶೋಭಾಯಾತ್ರೆ ಅಂಗವಾಗಿ ನಾಳೆ ಬೆಳಗ್ಗೆಯಿಂದಲೇ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಾಹನ ಸಂಚಾರ /ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.
ಮುಖ್ಯ ರಸ್ತೆ ಸಂಪರ್ಕಿಸುವ ಅಡ್ಡರಸ್ತೆಗಳಲ್ಲಿಯೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಾಳೆ ಮತ್ತು ನಾಡಿದ್ದು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ದತ್ತ ಜಯಂತಿ ಅಂಗವಾಗಿ, ಪ್ರಮುಖ ವೃತ್ತಗಳನ್ನು ಕೇಸರಿ ಬಂಟಿಂಗ್ಸ್ ಗಳಿಂದ ಸಿಂಗರಿಸಿದ್ದು, ಅನೇಕ ರಸ್ತೆಗಳಿಗೆ ವಿದ್ಯುತ್ ಈ ದೀಪಾಲಂಕಾರ ಮಾಡಲಾಗಿದೆ.

Leave a Reply

Your email address will not be published. Required fields are marked *

On Key

Related Posts

ಬಿಜೆಪಿಯಲ್ಲಿ ಮುಂದುವರಿದ ಸಂಘರ್ಷ :  ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷರು !!

ಚಿಕ್ಕಮಗಳೂರು: ದಿಡೀರ್ ವಿದ್ಯಮಾನದಲ್ಲಿ ನಗರಸಭೆ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪಕ್ಷದ ಆಂತರಿಕ ಒಪ್ಪಂದದಂತೆ ನಗರಸಭೆ ಅಧ್ಯಕ್ಷರು

ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ :  ಸಂಚಾರಿ ನಿಯಮ ಉಲ್ಲಂಘನೆ –  ದ್ವಿಚಕ್ರ ವಾಹನ ಚಾಲಕನಿಗೆ 14 ಸಾವಿರ ದಂಡ

ಚಿಕ್ಕಮಗಳೂರು: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ , ಹಲವು ಸಂಚಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಚಾಲಕನಿಗೆ

ರೈತರ ಸಮಾವೇಶ : ರೈತ–ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಲು ಒಕ್ಕೊರಲ ಆಗ್ರಹ

ಚಿಕ್ಕಮಗಳೂರು: ಅರಣ್ಯ ಕಾಯ್ದೆಗಳ ಹೆಸರಿನಲ್ಲಿ ಜಿಲ್ಲೆಯ ರೈತರ ಬದುಕನ್ನು ಅರಣ್ಯ ಇಲಾಖೆ ಕಸಿದು ಕೊಳ್ಳುತ್ತಿದ್ದು ಅಂತಹ ಕಾಯ್ದೆಗಳನ್ನು ರದ್ದುಪಡಿಸಬೇಕು, ರೈತರನ್ನು