ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ               

Share:

                      
ಚಿಕ್ಕಮಗಳೂರು: ಪೋಷಕರು ಮಕ್ಕಳಿಗೆ ಆಸ್ತಿ ಮಾಡಿ ಇಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು  ಚಿಕ್ಕಮಗಳೂರು ಸಂತ ಜೋಸೆಫರ  ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಫಾ.ಮಾರ್ಸೆಲ್ ಪಿಂಟೊ ಹೇಳಿದರು.                                  ಮೂಡಿಗೆರೆತಾಲೂಕಿನ ಬಣಕಲ್ ನಜರೆತ್ ಶಾಲೆಯ  ವಾರ್ಷಿಕೋತ್ಸವ ಉದ್ಘಾಟಿಸಿ ಪೋಷಕರು ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ ಎಂದರು.
ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿದರೆ ಮುಂದೆ ಅವರು ಬುದ್ದಿ ಶಕ್ತಿ, ಜ್ಞಾನ,ವಿವೇಕದಿಂದ ನಡೆದು  ಉತ್ತುಂಗ ರೀತಿಯಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹಳೆ ವಿದ್ಯಾರ್ಥಿ ಹಾಗೂ ವೈದ್ಯ ಡಾ.ಶಬರೀಶ್ ಮಾತನಾಡಿ ಜೀವನದ ಉತ್ತಮ ಮೌಲ್ಯಗಳನ್ನು ಈ ಶಾಲೆ ನನಗೆ ಕಲಿಸಿಕೊಟ್ಟಿದೆ.ಸಂಸ್ಥೆಗೆ ನಾನು ಚಿರಋಣಿಯಾಗಿದ್ದೇನೆಎಂದರು.
ಬಣಕಲ್ ಬಾಲಿಕಾ ಮರಿಯ ಚರ್ಚಿನ ಸಹಾಯಕ ಗುರುಗಳಾದ ಫಾ.ಥಾಮಸ್ ಕಲಘಟಗಿ , ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೊ, ಪಿಟಿಎ ಸದಸ್ಯೆ ಅನಿತಾ ಮಾತನಾಡಿದರು.  ಪರಿಸರ ಉಳಿಸುವ ಬಗ್ಗೆ ಮಕ್ಕಳು ನೃತ್ಯ, ನಾಟಕ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ  ಮನೋರಂಜಿಸಿದರು.

Leave a Reply

Your email address will not be published. Required fields are marked *

On Key

Related Posts

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್ ಮಾಡಿದ 103 ಪ್ರವಾಸಿಗರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು:ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಅನಾರೋಗ್ಯದ ಸಮಸ್ಯೆ : ಚೀಟಿ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ