ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಮರ ಒಂದು ಧರೆಗೆ ಉರುಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಚಾರ್ಮಾಡಿ ಘಾಟಿಯ ಮೂರನೇ ತಿರುವಿನ ಸಮೀಪ ಮರ ಉರುಳಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ಎರಡೂ ಬದಿಯಲ್ಲಿ ಸಾಲಾಗಿ ನಿಂತ ವಾಹನಗಳು ನಿಂತಿದ್ದವು.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್.ಒಂದು ಗಂಟೆ ಬಳಿಕ ಸ್ಥಳಕ್ಕೆ ಜೆಸಿಬಿ ತರಿಸಿ ಬಣಕಲ್ ಪೊಲೀಸರು-ಸ್ಥಳಿಯರ ಸಹಕಾರದಿಂದ
ತೆರವು ಕಾರ್ಯ ಮಾಡಲಾಯಿತು
ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು, ಸ್ಥಳಿಯರು ಮನವಿ ಮಾಡಿದ್ದಾರೆ.
