ಚಿಕ್ಕಮಗಳೂರು :ಜಿಲ್ಲೆಯ ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿದ್ದ 43 ಎಕರೆ ಭೂಮಿ ತೆರವುಗೊಳಿಸಲಾಗಿದೆ.
ಮುತ್ತೊಡಿ ವಲಯದ, ಕೆಸವಿನ ಮನೆ ಸರ್ವೇ ನಂಬರ್ 43ರಲ್ಲಿ ಚಿಕ್ಕಮಗಳೂರು ನಗರದ ನರೇಂದ್ರ ಪೈ ಎಂಬುವರಿಗೆ ಸೇರಿದ ಕೆಸವಿನಮನೆಹಕ್ಲು ತೋಟದಲ್ಲಿ ಅಭಯಾರಣ್ಯಕ್ಕೆ ಸೇರಿದ 43 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು.
ಈ ಸಂಭಂದ 2022-23 ಸಾಲಿನಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದ ಆದೇಶ:
ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ಅವರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ,ಅರಣ್ಯ ಒತ್ತುವರಿ ಅಂಶ ಸಾಬೀತಾದ ಹಿನ್ನೆಯಲ್ಲಿ ಒತ್ತುವರಿ ತೆರವು ಮಾಡಿಕೊಡುವಂತೆ ಒತ್ತುವರಿದಾರರಿಗೆ ಒಂದು ತಿಂಗಳು ಕಾಲಾವಕಾಶ ನೀಡಿ ಆದೇಶ ಮಾಡಲಾಗಿತ್ತು.
ಒತ್ತುವರಿದಾರರು ಅರಣ್ಯ ಒತ್ತುವರಿ ತೆರವು ಮಾಡಿಕೊಡದ ಹಿನ್ನೆಯಲ್ಲಿ ,ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ಕಳೆದ 3 ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಬೆಳೆದಿದ್ದ ಕಾಫಿ ತೆಗೆದು ಭದ್ರಾ ಅಭಯಾರಣ್ಯ ಹುಲಿ ಮೀಸಲು ಇಲಾಖಾ ವ್ಯಾಪ್ತಿಗೆ 43 ಎಕರೆ ಪ್ರದೇಶವನ್ನು ವಶಕ್ಕೆ ಪಡೆಯಲಾಗಿದೆ.
ಒತ್ತುವರಿ ತೆರವಿಗೆ ಒತ್ತಾಯ:
ಹಲವು ವರ್ಷಗಳಿಂದ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಅರಣ್ಯ ಒತ್ತುವರಿ ತೆರವು ಮಾಡಬೇಕೆಂದು ಒತ್ತಾಯ ಕೇಳಿಬಂದಿತ್ತು.ಅದರಲ್ಲೂ ಪ್ರತಿಷ್ಠಿತ ವ್ಯಕ್ತಿಗಳೇ ಅರಣ್ಯ ಒತ್ತುವರಿಗೆ ಮುಂದಾಗಿದ್ದಾರು.
ಅರಣ್ಯ ಸಚಿವರ ಆದೇಶ ಪಾಲನೆ:
ಇತ್ತೀಚೆಗೆ ರಾಜ್ಯ ಸರ್ಕಾರದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಒತ್ತುವರಿ ತೆರವು ಮಾಡಿ ಅರಣ್ಯ ವನ್ಯಜೀವಿ ನೆಲೆಗಳನ್ನು ರಕ್ಷಿಸಬೇಕೆಂದು ಆದೇಶ ಮಾಡಿದ್ದರು.
ಸದ್ಯ ಯಾವುದೇ ಮುಲಾಜು ಇಲ್ಲದೆ ಎಷ್ಟೇ ಒತ್ತಡ ಬಂದರೂ ಅಧಿಕಾರಿಗಳು ಒತ್ತುವರಿ ತೆರವು ಮಾಡಿದ್ದಾರೆ.ತ್ವರಿತವಾಗಿ ಒತ್ತುವರಿ ತೆರವು ಪ್ರಕರಣವನ್ನು ಇಲಾಖೆ ಕೈಗೆತ್ತಿಕೊಂಡ ಕ್ರಮವನ್ನು ಪರಿಸರಸಕ್ತರು ಸ್ವಾಗತಿಸಿದ್ದಾರೆ.
ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಲ್ ಕ್ಷೀರಸಾಗರ ಮಾರ್ಗದರ್ಶನದಲ್ಲಿ , ಭದ್ರಾ ಹುಲಿ ಮೀಸಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನ,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ನೇತೃತ್ವದಲ್ಲಿ ಅರಣ್ಯ ಒತ್ತುವರಿ ತೆರವು ಮಾಡಲಾಯಿತು.
ಇದೆ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಜಗದೀಶ್ ಮೇದ,ಗೌರವ್,ಸುಧಾಕರ ಸೇರಿದಂತೆ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.
