ಚಿಕ್ಕಮಗಳೂರು: ನಿರಂತರ ಮಳೆಯಿಂದ ಪದೇ ಪದೇ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನೆಮ್ಮಾರು – ಕೆರೆಕಟ್ಟೆ-ಕಾರ್ಕಳ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಶೃಂಗೇರಿ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ನೆಮ್ಮಾರು ಸಮೀಪ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಿರಂತರವಾಗಿ ಮಣ್ಣು ಜರುಗುತ್ತಿದೆ .
ಮುಂಜಾಗ್ರತಾ & ಸುರಕ್ಷತಾ ಕ್ರಮವಾಗಿ ತಾತ್ಕಾಲಿಕವಾಗಿ ಕೆರೆಕಟ್ಟೆ, ಎಸ್. ಕೆ ಬಾರ್ಡರ್ ಮೂಲಕ ಉಡುಪಿ ಮಂಗಳೂರು ಕಡೆ ಸಾಗುವ ವಾಹನಗಳ ಸಂಚಾರವನ್ನು ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ರಾಷ್ಟ್ರೀಯ
ಹೆದ್ದಾರಿ NH-169 ನಲ್ಲಿ ನಿರ್ಬಂಧಿಸಲಾಗಿದೆ .
ಶೃಂಗೇರಿಯಿಂದ ಉಡುಪಿ, ಮಂಗಳೂರು ಕಡೆ ಸಾಗುವ ವಾಹನಗಳಿಗೆ ಬಿದರಗೋಡು ಆಗುಂಬೆ ಮಾರ್ಗವಾಗಿ ಬದಲಿ ರಸ್ತೆ ಮಾರ್ಗವನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಸಹಯೋಗದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಪೂರ್ಣಗೊಂಡ ನಂತರ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಮುಕ್ತ ಗೊಳಿಸಲಾಗುವುದು ಎಂದಿದ್ದಾರೆ.
