ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಹೊರನಾಡಿನಲ್ಲಿ ವೆಂಕಟಸುಬ್ಬಾ ಜೋಯಿಸ್ ಮತ್ತು ನರಸಮ್ಮ ಸ್ಮರಣೆ ಕಂಚಿನ ಪುತ್ಥಳಿ ಅನಾವರಣ

Share:

ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆವರಣದಲ್ಲಿ ದಿ.ಡಿ.ಬಿ.ವೆಂಕಟಸುಬ್ಬಾ ಜೋಯಿಸ್ ಮತ್ತು ಶ್ರೀಮತಿ ನರಸಮ್ಮ ವೆಂಕಟಸುಬ್ಬಾ ಜೋಯಿಸ್ ಅವರ ಕಂಚಿನ ಪುತ್ಥಳಿಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನಾವರಣಗೊಳಿಸಿದರು.
ಲಲಿತಾ ಕಲಾಮಂಟಪದಲ್ಲಿ ನಡೆದ ಗ್ರಾಮೀಣಾಭಿವೃದ್ದಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು ಶ್ರೀಕ್ಷೇತ್ರದಲ್ಲಿ ಜಿ.ಭೀಮೇಶ್ವರ ಜೋಷಿಯವರ ಅಜ್ಜ ದಿ. ಹಣಡಿ.ಬಿ.ವೆಂಕಸುಬ್ಬಾ ಜೋಯಿಸ್ ಮತ್ತು ಅವರ ಧರ್ಮಪತ್ನಿ ನರಸಮ್ಮ ವೆಂಕಟಸುಬ್ಬಾ ಜೋಯಿಸ್ ಅವರ ಪ್ರತಿಮೆ ಲೋಕಾರ್ಪಣೆ ಮಾಡುವ ಭಾಗ್ಯ ನನ್ನದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭಾರತ ವಿವಿಧ ರೀತಿಯ ಸಂಸ್ಕೃತಿಯನ್ನು ಹೊಂದಿದೆ. ಆದಿಗುರು ಶಂಕರಾಚಾರ್ಯರು ಜನಿಸಿದ ನಾಡು ಇದಾಗಿದ್ದು, ಭಾರತದ ಸನಾತನ ಸಂಸ್ಕೃತಿಯನ್ನು ಹೊಂದಿದೆ. ಮಂದಿರಗಳು ಬರೀ ಪೂಜಾ ಕೇಂದ್ರಗಳು ಮಾತ್ರವಾಗಿರದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್ ದಿ.ಡಿ.ಬಿ.ವೆಂಕಟಸುಬ್ಬಾ ಜೋಯಿಸ್ ಅವರಿಗೆ ನುಡಿ ನಮನ ಸಲ್ಲಿಸಿ, ಇಲ್ಲಿನ ತಪಸ್ಸಿನ ಫಲದ ಕಾರಣ ಇಂದು ಈ ದೇವಾಲಯ ಹತ್ತು ಹಲವಾರು ಜನೋಪಯೋಗಿ ಕಾರ್ಯಗಳನ್ನು ಮುಂದುವರಿಸಿಕೊಂಡು ಬರುತ್ತಿದೆ.
ವೆಂಟಸುಬ್ಬಾ ಜೋಯಿಸ್ ಅಪಾರ ಪಾಂಡಿತ್ಯವನ್ನು ಪಡೆದಿದ್ದ್ದ ಒಬ್ಬ ಕಾಲಜ್ಞಾನಿಯಾಗಿ ಸಾಂಸ್ಕೃತಿಕ ಲೋಕದ ಬಗ್ಗೆ ಕಾಳಜಿ ಹೊಂದಿದ್ದರು ಎಂದು ಹೇಳಿದರು.
ಹರಿಹರ ಪೀಠದ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠಂನ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ `ಶ್ರೀ ಅನ್ನಪೂರ್ಣ ಪಾದಸೇವಾ ದುರಂಧರ’ ಪುಸ್ತಕವನ್ನು ಲೋಕಾರ್ಪಣೆೆ ಮಾಡಿದರು.
ಶ್ರೀ ಕ್ಷೇತ್ರದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಕುಟುಂಬ ಪಿತೃಋಣ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿ ಐದು ಋಣಗಳಿವೆ. ಅದರಲ್ಲಿ ಮೊದಲನೆಯದೇ ಪಿತ್ರೃಋಣ, ವೆಂಕಟಸುಬ್ಬಾ ಜೋಯಿಸ್ ಅವರು ಐದನೆಯ ಧರ್ಮಕರ್ತರಾಗಿ ಶ್ರೀಕ್ಷೇತ್ರ ಎಂದರೆ ಏನು ಎಂಬುವುದನ್ನು ನಿರೂಪಿಸಿದ್ದಾರೆ. ಅಂದಿನ ಕಾಲದಲ್ಲಿ ಶಾಲಾ ಮಕ್ಕಳಿಗೆ ಅನ್ನದಾಸೋಹದಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಪ್ರತಿಯೊಬ್ಬರಿಗೂ ಜೀವನ ಎಂದರೆ ಏನು ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಅವರ ಆದರ್ಶ ಗುಣಗಳನ್ನು ಮುಂದಿನ ಪೀಳಿಗೆಗೆ ನೆನಪಿಸುವ ನಿಟ್ಟಿನಲ್ಲಿ ಜಿ.ಭೀಮೇಶ್ವರ ಜೋಷಿ ತಮ್ಮ ಅಜ್ಜ-ಅಜ್ಜಿಯ ಪುತ್ಥಳಿಗಳನ್ನು ಅನಾವರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಕ್ಷೇತ್ರದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಅಧ್ಯಕ್ಷತೆ ವಹಿಸಿ ಅಜ್ಜ ಜೋಯಿಸ್ ದಂಪತಿಗಳು ತಮ್ಮ ಸರ್ವಸ್ವವನ್ನು ಮುಡುಪಿಟ್ಟು, ಉನ್ನತ ಜೀವನ ನಡೆಸಿದ ದಂಪತಿಗಳ ಪುತ್ಥಳಿಯನ್ನು ಇಂದು ಅನಾವರಣ ಮಾಡುವ ಒಂದು ಅವಕಾಶ ತಮಗೆ ದೊರಕಿದೆ. ಅವರು ಹಾಕಿ ಕೊಟ್ಟ ಪಥದಲ್ಲಿ ಸಾಗುತ್ತಾ ಮುನ್ನಡೆಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು.
ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸೇನೆಗಾಗಿ ಕ್ಷೇತ್ರದ ವತಿಯಿಂದ ೧೦ ಲಕ್ಷ ರೂ.ಗಳ ಚೆಕ್ಕನ್ನು ನೀಡಿದರು.
ವೇದಿಕೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವೆ ಮೋಟಮ್ಮ, ರಾಜಲಕ್ಷ್ಮಿ ಭೀ.ಜೋಷಿ, ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು. ರಾಮನಾರಾಯಣ್ ಜೋಷಿ ಸ್ವಾಗತಿಸಿ, ರಾಜಗೋಪಾಲ್ ಜೋಷಿ ವಂದಿಸಿದರು,

Leave a Reply

Your email address will not be published. Required fields are marked *

On Key

Related Posts

ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ತಾ.ಪಂ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ