ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಮೆಡಿಕಲ್ ಕಾಲೇಜು : ೩.೫ ಕೋಟಿ ರೂ.ವೆಚ್ಚದಲ್ಲಿ ಮಳೆ ನೀರು ಕೊಯ್ಲು -ಸಚಿವರ ಭರವಸೆ

Share:

ಚಿಕ್ಕಮಗಳೂರು: ಇಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೀರಿನ ಸಮಸ್ಯೆ ಬಗೆಹರಿಸಲು ಮಳೆ ನೀರಿನ ಕೊಯ್ಲು ಯೋಜನೆಯನ್ನು ೩.೫ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ತಿಳಿಸಿದರು.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ವೀಕ್ಷಣೆ ಮಾಡಿ ಮಾತನಾಡಿ, ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ಸಂಸ್ಥೆಯ ನಿರ್ದೇಶಕರು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಂಸ್ಥೆಯ ಕಾಮಗಾರಿ ಶೇ.೯೮ ರಷ್ಟು ಪೂರ್ಣಗೊಂಡಿದೆ , ಬಹು ನಿರೀಕ್ಷಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ತಾಯಿ-ಮಗುವಿನ ಆರೈಕೆ ಕೇಂದ್ರದ ಕಾಮಗಾರಿ ಶೇ.೭೫ ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಶಿವಮೊಗ್ಗ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಡೀನ್ ಡಾ.ಹರೀಶ್, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಇದ್ದರು.

Leave a Reply

Your email address will not be published. Required fields are marked *

On Key

Related Posts

ಬಿಜೆಪಿಯಲ್ಲಿ ಮುಂದುವರಿದ ಸಂಘರ್ಷ :  ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷರು !!

ಚಿಕ್ಕಮಗಳೂರು: ದಿಡೀರ್ ವಿದ್ಯಮಾನದಲ್ಲಿ ನಗರಸಭೆ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪಕ್ಷದ ಆಂತರಿಕ ಒಪ್ಪಂದದಂತೆ ನಗರಸಭೆ ಅಧ್ಯಕ್ಷರು

ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ :  ಸಂಚಾರಿ ನಿಯಮ ಉಲ್ಲಂಘನೆ –  ದ್ವಿಚಕ್ರ ವಾಹನ ಚಾಲಕನಿಗೆ 14 ಸಾವಿರ ದಂಡ

ಚಿಕ್ಕಮಗಳೂರು: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ , ಹಲವು ಸಂಚಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಚಾಲಕನಿಗೆ

ರೈತರ ಸಮಾವೇಶ : ರೈತ–ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಲು ಒಕ್ಕೊರಲ ಆಗ್ರಹ

ಚಿಕ್ಕಮಗಳೂರು: ಅರಣ್ಯ ಕಾಯ್ದೆಗಳ ಹೆಸರಿನಲ್ಲಿ ಜಿಲ್ಲೆಯ ರೈತರ ಬದುಕನ್ನು ಅರಣ್ಯ ಇಲಾಖೆ ಕಸಿದು ಕೊಳ್ಳುತ್ತಿದ್ದು ಅಂತಹ ಕಾಯ್ದೆಗಳನ್ನು ರದ್ದುಪಡಿಸಬೇಕು, ರೈತರನ್ನು