ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಎರಡು ಪ್ರತ್ಯೇಕ ಅಪಘಾತ ಪ್ರಕರಣ : ಓರ್ವ ಸಾವು-ಇನ್ನೊಬ್ಬನ ಸ್ಥಿತಿ ಗಂಭೀರ

Share:

ಚಿಕ್ಕಮಗಳೂರು : ಸರ್ಕಾರಿ 2 ಬಸ್ಸುಗಳ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಓರ್ವ ಸಾವನ್ನಪ್ಪಿದ್ದು ಓರ್ವನಿಗೆ ಗಂಭೀರ ಗಾಯ ವಾಗಿದೆ.
ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಘಟನೆ ನಡೆದಿದೆ.
ಕಡೂರು ಎಪಿಎಂಸಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿಯಾಗಿ ಹುಸೇನ್ (23) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿಯಾಗಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.
ಕಾರಿಗೆ ಡಿಕ್ಕಿಯೊಡೆದು ಲೈಟ್ ಕಂಬಕ್ಕೆ ಸರ್ಕಾರಿ ಬಸ್ ಅಪ್ಪಳಿಸಿದ್ದು,ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ವಿದ್ಯುತ್ ಲೈನ್ ಫ್ಯೂಸ್ ಕಟ್ ಆಗಿ ಭಾರೀ ಅನಾಹುತ ತಪ್ಪಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯ ಆಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

On Key

Related Posts

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ : ಜಿಲ್ಲಾಧಿಕಾರಿ

ಚಿಕ್ಕಮಗಳೂರು :ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ

ಹಾಸ್ಟೆಲ್ ಗಳಿಗೆ  ‘ಆರಕ್ಷಕ ಗೆಳತಿ’ ಭೇಟಿ : ಕುಂದು ಕೊರತೆ ವಿಚಾರಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದ್ದು ತಿಂಗಳಲ್ಲಿ ಒಂದು ಬಾರಿ ಹಾಸ್ಟೆಲ್

ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ಚಿಕ್ಕಮಗಳೂರು:ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ