ಚಿಕ್ಕಮಗಳೂರು : ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ-ಮಳೆ ಆಗುತ್ತಿದ್ದು ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕವಿಕಲ್ ಗಂಡಿ ಬಳಿ ಘಟನೆ ನಡೆದಿದ್ದು,
ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಬಿದ್ದ ಕೂಡಲೇ ಹಿಂದಿನ ವಾಹನದಲ್ಲಿ ಇದ್ದವರು ತೆರಳಿ ಪ್ರಯಾಣಿಕರ ರಕ್ಷಣೆಗೆ ಮಾಡಿದ್ದಾರೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು,
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ .
ಭೂಕುಸಿತ: ಮಳೆ ಹಿನ್ನೆಲೆಯಲ್ಲಿ ಶೃಂಗೇರಿ ಸಮೀಪದ ನೆಮ್ಮಾರು ಬಳಿ ಭೂಕುಸಿತ ಉಂಟಾಗಿ ಸಂಚಾರ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಹಿಟಾಚಿ ನೆರವಿನಿಂದ ಮಣ್ಣನ್ನು ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಕೆಲಸ ಭರದಿಂದ ಸಾಗಿದೆ.
ಬಾಬಾ ಬುಡನ್ ಗಿರಿ ರಸ್ತೆಯ ತಿರುಗುವೊಂದರಲ್ಲಿಯೂ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದೆ.
ಜಿಲ್ಲೆಯ ಮಲೆನಾಡ ಭಾಗದಲ್ಲಿ ಮಳೆ ತೀವ್ರಗೊಂಡಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.