ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಮೂಡಿಗೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಿಜಯ್ ಹಾಗೂ ಶೇಖರ್ ಎಂಬವರ ದ್ವಿಚಕ್ರವಾಹನಗಳಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಹಾನಿಗೊಂಡಿದ್ದು ಇಬ್ಬರಿಗೆ ಪೆಟ್ಟಾಗಿದ್ದು ಆಸ್ಪತ್ರೆ ಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
