ಚಿಕ್ಕಮಗಳೂರು: ದಿಡೀರ್ ವಿದ್ಯಮಾನದಲ್ಲಿ ನಗರಸಭೆ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ನಗರಸಭೆ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇಂದು ಸಂಜೆ ಅಂಗೀಕಾರ ಆಗಬೇಕಾಗಿತ್ತು.
ಇದ್ದಕ್ಕಿದ್ದಂತೆ ಪಕ್ಷದೊಳಗೆ ನಡೆದ ವಿದ್ಯಮಾನದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಾಜೀನಾಮೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಅಧ್ಯಕ್ಷರು ರಾಜೀನಾಮೆ ಪಡೆದ ಸುದ್ದಿ ಹೊರಬೀಳುತ್ತಿದ್ದಂತೆ ಪಕ್ಷದ ಮುಖಂಡರು ಚುರುಕಾಗಿದ್ದು, ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯನವರ ಹೆಗಲಿಗೆ ಜವಾಬ್ದಾರಿ ವಹಿಸಿದ್ದಾರೆ.
ಕಡೂರಿನಲ್ಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಮುತ್ತಯ್ಯ ಅವರನ್ನು ಕರೆತಂದಿದ್ದು, ಇದೀಗ ಜಿಲ್ಲಾಧಿಕಾರಿಗಳ ಕಚೇರಿಗೆ ಕರೆದೊಯ್ದು ರಾಜೀನಾಮೆ ಹಿಂದೆ ಪಡೆದ ಪತ್ರವನ್ನು ಹಿಂದಕ್ಕೆ ಪಡೆದು, ರಾಜೀನಾಮೆ “ಅಂಗೀಕಾರ” ಆಗುವಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ನಗರಸಭೆ ಅಧ್ಯಕ್ಷರ ಹಾವು – ಏಣಿ ಆಟ ಪಕ್ಷದ ನಿಷ್ಠಾವಂತರಲ್ಲಿ ಅಸಹ್ಯ ಮೂಡಿಸಿದ್ದು, ಅಧಿಕಾರ ಪಡೆಯುವ ಸಂದರ್ಭದಲ್ಲಿ ಒಂದು ರೀತಿ ನಂತರದಲ್ಲಿ ಒಂದು ರೀತಿ ನಡೆದುಕೊಳ್ಳುತ್ತಿರುವ ಸದಸ್ಯರ ವರ್ತನೆಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮಾಜಿ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಸಿ .ಟಿ. ರವಿ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಪಕ್ಷದಲ್ಲಿ ಹಿಡಿತ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆಯೇ ಎನ್ನುವ ಅನುಮಾನಗಳು ಕಾಡುತ್ತಿವೆ
