ಚಿಕ್ಕಮಗಳೂರು :ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಘಟನೆ ನಡೆದಿದೆ.ಗಣಪತಿಕಟ್ಟೆ ನಿವಾಸಿ ಶಮಂತ (23) ಮೃತ ಯುವಕ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ಸಮೇತ ನದಿಗೆ ಯುವಕ ಬಿದ್ದಿದ್ದಾನೆ.
ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ ಚೀಪ್ ಚಾಲಕ ಶಮಂತ.
ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸುರಿಯುತ್ತಿರೋ ಮಳೆಯಿಂದ ಕಾರ್ಯಾಚರಣೆಗೂ ತೊಂದರೆ ಆಗಿದೆ
ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಹೋಗಿದ್ದು,ಮುಳುಗು ತಜ್ಞ ಮಲ್ಪೆ ಈಶ್ವರ್ ಕರೆಸಲು ಪೋಲಿಸರು ನಿರ್ಧಾರ ಮಾಡಿದ್ದಾರೆ.
